ಬ್ರೇಕಿಂಗ್ ನ್ಯೂಸ್
20-07-21 03:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 20: ಸಿಎಂ ಯಡಿಯೂರಪ್ಪ ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯ ಹೆಸರು ಕೇಳಿ ಬರ್ತಿರುವಾಗಲೇ ನಿರಾಣಿ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದೆ. ಎನ್ ಜಿಓ ಸಂಸ್ಥೆಯೊಂದರ ಆಲಂ ಪಾಷಾ ಎನ್ನುವವರು ನಿರಾಣಿ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಾರೆ.
ನಿರಾಣಿಯವರು ಮುಧೋಳ, ಬೆಳಗಾವಿ, ಬಾಗಲಕೋಟ ಭಾಗದ ಸಾವಿರಾರು ಸಣ್ಣ ರೈತರ ಹೆಸರಲ್ಲಿ ಬೆಳೆ ಸಾಲ ಪಡೆದು ವಂಚನೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬೆಳೆಸಾಲವನ್ನು ಬೋಗಸ್ ಹೆಸರಲ್ಲಿ ಪಡೆದು ಅದರ ಹಣವನ್ನು ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿ.ನಲ್ಲಿ ಜಮಾವಣೆ ಮಾಡಿದ್ದಾರೆ. ಶೇ.4ರ ಬಡ್ಡಿದರ ಕೃಷಿ ಸಾಲವನ್ನು ರೈತರ ನಕಲಿ ಆಧಾರ್ ಕಾರ್ಡ್, ನಕಲಿ ಬ್ಯಾಂಕ್ ಖಾತೆ ಮೂಲಕ ಸಾವಿರಾರು ಕೋಟಿ ರೂಪಾಯಿ ಪಡೆದು ಅವ್ಯವಹಾರ ಮಾಡಿದ್ದಾರೆ. ವಿಜಯ ಸೌಹಾರ್ದ ಕ್ರೆಡಿಟ್ ಸೊಸೈಟಿ ಹೆಸರಲ್ಲಿ ಎಂಟು ಸಾವಿರ ಕೋಟಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತದಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದಲ್ಲದೆ, ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ನಿರಾಣಿ ಬಳಿ 500 ಸಿಡಿಗಳಿವೆ. ಹಾಗಾಗಿ ಅವರಿಗೆ ಹೆದರಿ ಸಚಿವ ಸ್ಥಾನ ಕೊಡಲಾಗಿತ್ತು. ಅದಕ್ಕಾಗಿಯೇ ಕೆಲವರು ಕೋರ್ಟಿಗೆ ಹೋಗಿ ಸ್ಟೇ ತಂದಿದ್ದಾರೆ. ಕೋರ್ಟಿಗೆ ಹೋದವರ ಎಲ್ಲಾ ಸಿಡಿಗಳು ಇದೆ. ಆರು ಮಂತ್ರಿಗಳು ಸ್ಟೇ ತಗೊಂಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಇರುವವರು ಸ್ಟೇ ತಗೊಳ್ಳಬೇಕು ಯಾಕೆ ? ಆನೇ ಆರೋಪ ಬಂದರೂ ಅದನ್ನು ಎದುರಿಸೋದು ಬಿಟ್ಟು ಅದನ್ನು ಮಾಧ್ಯಮಗಳು ಪ್ರಕಟಿಸಲೇಬಾರದು ಎಂದು ಸ್ಟೇ ತಗೊಳ್ಳೋದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ ಆಲಂ ಪಾಷಾ.
ನಿರಾಣಿ ವಿರುದ್ಧ ಹಲವಾರು ಕ್ರಿಮಿನಲ್ ಕೇಸುಗಳಿವೆ. ಸಿಡಿ ಮುಂದಿಟ್ಟು ಸಿಎಂ ಸ್ಥಾನಕ್ಕೆ ಬರುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಬಿಡುವ ಜಾಗದಲ್ಲಿ ಅವರ ಅಪ್ಪನಂಥವರನ್ನು ಯಾಕೆ ತರಬೇಕು ಎಂದು ಪ್ರಶ್ನಿಸಿದ ಪಾಷಾ, ಬಿಜೆಪಿಯಲ್ಲಾಗಲೀ ಕಾಂಗ್ರೆಸಿನಲ್ಲಾಗಲೀ ಇಂಥವರನ್ನು ಯಾಕೆ ಆಯ್ಕೆ ಮಾಡಬೇಕು. ಹಣಕಾಸು ಇದ್ದವರಿಗೆ ಮಾತ್ರ ಸಿಎಂ ಸ್ಥಾನವಾ ? ನಾನು ಹೇಳ್ತಿರೋದು ತಪ್ಪು ಆಗಿದ್ದಲ್ಲಿ ಸಚಿವರಾಗಿರುವ ನಿರಾಣಿ ನನ್ನನ್ನು ಅರೆಸ್ಟ್ ಮಾಡಲಿ ಎಂದು ಸವಾಲೆಸೆದರು. ಬೆಂಗಳೂರಿನಲ್ಲಿ ದಿ ಹೆಲ್ಪಿಂಗ್ ಸಿಟಿಜನ್ ಅಂಡ್ ಪೀಪಲ್ಸ್ ಕೋರ್ಟ್ ಎನ್ನುವ ಎನ್ ಜಿಓ ಸಂಸ್ಥೆಯನ್ನು ಆಲಂ ಪಾಷಾ ನಡೆಸುತ್ತಿದ್ದಾರೆ.
Video:
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm