ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm