ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm