ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm