ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm