ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
29-03-24 03:43 pm
Bangalore Correspondent
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 05:09 pm
Bangalore Correspondent
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm