ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm