ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm