ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm