ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm