ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm