ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm