ಬ್ರೇಕಿಂಗ್ ನ್ಯೂಸ್
22-07-21 12:01 pm Headline Karnataka News Network ಕರ್ನಾಟಕ
ನವದೆಹಲಿ, ಜುಲೈ 22: ನಾಯಕತ್ವ ಬದಲಾಯಿಸುವ ಕುರಿತು ಕರ್ನಾಟಕದಲ್ಲಿ ಭಾರೀ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಹೈಕಮಾಂಡ್ ನಡೆಗೆ ರಾಷ್ಟ್ರೀಯ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅಪಸ್ವರ ಎತ್ತಿದ್ದಾರೆ. ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಚಮಚಾಗಿರಿ ಮಾಡಿಲ್ಲವೆಂದು ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ. ಆದರೆ ಯಡಿಯೂರಪ್ಪನವರು ಇಲ್ಲದೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಕಳೆದ ಬಾರಿ ಪಕ್ಷಕ್ಕೆ ಮರಳಿದ್ದಕ್ಕೆ ಬಿಜೆಪಿ ಮತ್ತೆ ಅಧಿಕಾರ ಹಿಡಿದಿತ್ತು. ಮರಳಿ ಅದೇ ರೀತಿಯ ತಪ್ಪನ್ನು ಯಾಕೆ ಮಾಡಲಾಗುತ್ತಿದೆ ಎಂದು ಅವರು ಟ್ವೀಟ್ ಮೂಲಕ ತಿವಿದಿದ್ದಾರೆ.
ಈ ಮೂಲಕ ಕರ್ನಾಟಕದ ನಾಯಕತ್ವ ಬದಲಾವಣೆ ಕುರಿತು ಕೇಂದ್ರದ ನಾಯಕರು ತುಟಿ ಬಿಚ್ಚಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಈ ಮೂಲಕ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಬಿಎಸ್ವೈ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಹಿಂದೆ ಮಾಡಿದ ತಪ್ಪನ್ನೇ ಹೈಕಮಾಂಡ್ ಮತ್ತೆ ಮಾಡಿದರೆ ಅದರಿಂದ ಕೇಡೇ ಆಗಲಿದೆ ಎಂದು ಹೇಳಿದ್ದಾರೆ.
It was Yeddiruppa who first brought BJP to power in Karnataka. Some conspired to remove him since he would not be a chamcha. Without Him BJP could not return power in the State. Only upon his return to BJP could the party win again. Why repeat the same mistake?
— Subramanian Swamy (@Swamy39) July 21, 2021
Senior BJP leader Subramanian Swamy on Wednesday, July 21, 2021, cautioned the party leadership against removing B.S.Yediyurappa as the Karnataka Chief Minister as he brought the party to power in the State.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm