ಬ್ರೇಕಿಂಗ್ ನ್ಯೂಸ್
22-07-21 04:37 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 22: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಪದೇ ಪದೇ ಹೇಳಿಕೆ ಕೊಟ್ಟಿದ್ದಾರೆ. ಇದರಿಂದ ರಾಜ್ಯದ ಆಡಳಿತ ಯಂತ್ರ ಕುಸಿಯುತ್ತದೆ. ಯಾರೋ ಕಾಣದ ಕೈಗಳ ಕೈವಾಡದಿಂದ ಇದೆಲ್ಲ ನಡೆಯುತ್ತಿದೆ ಎಂದು ಲಿಂಗಾಯತ ಮಠಗಳ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಗುಬ್ಬಿಯ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಲಿಂಗಾಯತ ಸ್ವಾಮೀಜಿಗಳ ಸಭೆಯ ಬಳಿಕ ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇಡೀ ನಾಡಿನ ಸಮಸ್ತ ಜನತೆ ಯಡಿಯೂರಪ್ಪ ನೇತೃತ್ವ ಬಯಸುತ್ತಿದೆ, ನಾವು ಕೂಡ ಅದನ್ನೇ ಬಯಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಉನ್ನತ ಅಧಿಕಾರ ಹಿಡಿದವರ ಮಕ್ಕಳು ಮತ್ತು ಕುಟುಂಬ ಸೇವೆ ಮಾಡಲು ರಾಜಕೀಯ ಹೊರತುಪಡಿಸಿ ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಇದು ಮಹತ್ವದ ವಿಚಾರವಾಗಿದ್ದು ರಾಜಕಾರಣಿಗಳ ಮಕ್ಕಳಿಗೆ ಬಹಳ ಮುಖ್ಯವಾಗುತ್ತದೆ. ದೇಶದ ಜನ, ರಾಜ್ಯದ ಜನ ಗಮನಿಸುತ್ತಿರುತ್ತಾರೆ. ಮಕ್ಕಳು ಕುಟುಂಬದವರು ಅಧಿಕಾರದಲ್ಲಿದ್ದವರ ಹತ್ರಕ್ಕೆ ಹೋಗ್ಬಾರ್ದು. ಮಕ್ಕಳು ತಮಗೆ ತಾವೇ ಸ್ವಯಂ ಪ್ರತಿಬಂಧನೆ ಹಾಕಿಕೊಳ್ಳಬೇಕು ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೆತ್ತದೆ ರಾಜಕೀಯ ಮತ್ತು ಮಕ್ಕಳ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದಾರೆ.

ಅಧಿಕಾರದಲ್ಲಿದ್ದವರ ಮಕ್ಕಳನ್ನ ಬೇರೆಯವರು ಎದುರುಗಡೆ ಹೊಗಳಬಹುದು. ಆದರೆ ಇಡೀ ದೇಶದ ಜನ 90 ಭಾಗದ ಜನ ಆಡಳಿಯ ಯಂತ್ರದ ವ್ಯವಸ್ಥೆಯನ್ನ ಗಮನಿಸ್ತಿರ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಪುತ್ರ ವಿಜಯೇಂದ್ರ ಆಡಳಿತ ಯಂತ್ರದಿಂದ ದೂರ ಇರಬೇಕು ಎಂದು ಚಂದ್ರಶೇಖರ ಸ್ವಾಮಿಜಿ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ಯಾವ ತಪ್ಪುಗಳನ್ನ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ಯೋ ಗೊತ್ತಿಲ್ಲ. ತಪ್ಪುಗಳಿದ್ದರೆ ಕ್ಷಮಿಸಿ, ಯಡಿಯೂರಪ್ಪನವರನ್ನು ಮುಂದುವರೆಸಬೇಕು ಎಂದು ಇದೇ ವೇಳೆ ದೊಡ್ಡಗುಣಿ ಮಠ ರೇವಣ ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಯಡಿಯೂರಪ್ಪ 60 ವರ್ಷಗಳಿಂದ ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಜಾತಿ ಮತ ಪಂಥ ಬಿಟ್ಟು ಸರ್ವರಿಗೂ ಒಳಿತನ್ನು ಮಾಡಿದ್ದಾರೆ. ಮೊರಾರ್ಜಿ ದೇಸಾಯಿ 85 ವರ್ಷ ವಯಸ್ಸಿನಲ್ಲಿ ಪ್ರಧಾನಿಯಾಗಿದ್ದರು. ಯಡಿಯೂರಪ್ಪನರಿಗೆ ಅಷ್ಟೇನು ವಯಸ್ಸಾಗಿಲ್ಲ. ಯಾವ ಜಾತಿ ಎನ್ನದೇ ಪ್ರತಿ ಮಠಮಾನ್ಯ, ಧರ್ಮಪೀಠಗಳಿಗೆ ಅನುದಾನ ಕೊಟ್ಟಿದ್ದಾರೆ. ಅಂಥವರನ್ನು ಬದಲಾಯಿಸಬಾರದು ಎಂದು ಹೇಳಿದರು.
Karnataka CM Yediyurappa hints at stepping down after July 26 Chandrashekar Swamiji makes some shocking statements.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm