ಬ್ರೇಕಿಂಗ್ ನ್ಯೂಸ್
22-07-21 04:37 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 22: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಪದೇ ಪದೇ ಹೇಳಿಕೆ ಕೊಟ್ಟಿದ್ದಾರೆ. ಇದರಿಂದ ರಾಜ್ಯದ ಆಡಳಿತ ಯಂತ್ರ ಕುಸಿಯುತ್ತದೆ. ಯಾರೋ ಕಾಣದ ಕೈಗಳ ಕೈವಾಡದಿಂದ ಇದೆಲ್ಲ ನಡೆಯುತ್ತಿದೆ ಎಂದು ಲಿಂಗಾಯತ ಮಠಗಳ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಗುಬ್ಬಿಯ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಲಿಂಗಾಯತ ಸ್ವಾಮೀಜಿಗಳ ಸಭೆಯ ಬಳಿಕ ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇಡೀ ನಾಡಿನ ಸಮಸ್ತ ಜನತೆ ಯಡಿಯೂರಪ್ಪ ನೇತೃತ್ವ ಬಯಸುತ್ತಿದೆ, ನಾವು ಕೂಡ ಅದನ್ನೇ ಬಯಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಉನ್ನತ ಅಧಿಕಾರ ಹಿಡಿದವರ ಮಕ್ಕಳು ಮತ್ತು ಕುಟುಂಬ ಸೇವೆ ಮಾಡಲು ರಾಜಕೀಯ ಹೊರತುಪಡಿಸಿ ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಇದು ಮಹತ್ವದ ವಿಚಾರವಾಗಿದ್ದು ರಾಜಕಾರಣಿಗಳ ಮಕ್ಕಳಿಗೆ ಬಹಳ ಮುಖ್ಯವಾಗುತ್ತದೆ. ದೇಶದ ಜನ, ರಾಜ್ಯದ ಜನ ಗಮನಿಸುತ್ತಿರುತ್ತಾರೆ. ಮಕ್ಕಳು ಕುಟುಂಬದವರು ಅಧಿಕಾರದಲ್ಲಿದ್ದವರ ಹತ್ರಕ್ಕೆ ಹೋಗ್ಬಾರ್ದು. ಮಕ್ಕಳು ತಮಗೆ ತಾವೇ ಸ್ವಯಂ ಪ್ರತಿಬಂಧನೆ ಹಾಕಿಕೊಳ್ಳಬೇಕು ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೆತ್ತದೆ ರಾಜಕೀಯ ಮತ್ತು ಮಕ್ಕಳ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದಾರೆ.

ಅಧಿಕಾರದಲ್ಲಿದ್ದವರ ಮಕ್ಕಳನ್ನ ಬೇರೆಯವರು ಎದುರುಗಡೆ ಹೊಗಳಬಹುದು. ಆದರೆ ಇಡೀ ದೇಶದ ಜನ 90 ಭಾಗದ ಜನ ಆಡಳಿಯ ಯಂತ್ರದ ವ್ಯವಸ್ಥೆಯನ್ನ ಗಮನಿಸ್ತಿರ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಪುತ್ರ ವಿಜಯೇಂದ್ರ ಆಡಳಿತ ಯಂತ್ರದಿಂದ ದೂರ ಇರಬೇಕು ಎಂದು ಚಂದ್ರಶೇಖರ ಸ್ವಾಮಿಜಿ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ಯಾವ ತಪ್ಪುಗಳನ್ನ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ಯೋ ಗೊತ್ತಿಲ್ಲ. ತಪ್ಪುಗಳಿದ್ದರೆ ಕ್ಷಮಿಸಿ, ಯಡಿಯೂರಪ್ಪನವರನ್ನು ಮುಂದುವರೆಸಬೇಕು ಎಂದು ಇದೇ ವೇಳೆ ದೊಡ್ಡಗುಣಿ ಮಠ ರೇವಣ ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಯಡಿಯೂರಪ್ಪ 60 ವರ್ಷಗಳಿಂದ ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಜಾತಿ ಮತ ಪಂಥ ಬಿಟ್ಟು ಸರ್ವರಿಗೂ ಒಳಿತನ್ನು ಮಾಡಿದ್ದಾರೆ. ಮೊರಾರ್ಜಿ ದೇಸಾಯಿ 85 ವರ್ಷ ವಯಸ್ಸಿನಲ್ಲಿ ಪ್ರಧಾನಿಯಾಗಿದ್ದರು. ಯಡಿಯೂರಪ್ಪನರಿಗೆ ಅಷ್ಟೇನು ವಯಸ್ಸಾಗಿಲ್ಲ. ಯಾವ ಜಾತಿ ಎನ್ನದೇ ಪ್ರತಿ ಮಠಮಾನ್ಯ, ಧರ್ಮಪೀಠಗಳಿಗೆ ಅನುದಾನ ಕೊಟ್ಟಿದ್ದಾರೆ. ಅಂಥವರನ್ನು ಬದಲಾಯಿಸಬಾರದು ಎಂದು ಹೇಳಿದರು.
Karnataka CM Yediyurappa hints at stepping down after July 26 Chandrashekar Swamiji makes some shocking statements.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm