ಬ್ರೇಕಿಂಗ್ ನ್ಯೂಸ್
22-07-21 04:37 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 22: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಪದೇ ಪದೇ ಹೇಳಿಕೆ ಕೊಟ್ಟಿದ್ದಾರೆ. ಇದರಿಂದ ರಾಜ್ಯದ ಆಡಳಿತ ಯಂತ್ರ ಕುಸಿಯುತ್ತದೆ. ಯಾರೋ ಕಾಣದ ಕೈಗಳ ಕೈವಾಡದಿಂದ ಇದೆಲ್ಲ ನಡೆಯುತ್ತಿದೆ ಎಂದು ಲಿಂಗಾಯತ ಮಠಗಳ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಗುಬ್ಬಿಯ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಲಿಂಗಾಯತ ಸ್ವಾಮೀಜಿಗಳ ಸಭೆಯ ಬಳಿಕ ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇಡೀ ನಾಡಿನ ಸಮಸ್ತ ಜನತೆ ಯಡಿಯೂರಪ್ಪ ನೇತೃತ್ವ ಬಯಸುತ್ತಿದೆ, ನಾವು ಕೂಡ ಅದನ್ನೇ ಬಯಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಉನ್ನತ ಅಧಿಕಾರ ಹಿಡಿದವರ ಮಕ್ಕಳು ಮತ್ತು ಕುಟುಂಬ ಸೇವೆ ಮಾಡಲು ರಾಜಕೀಯ ಹೊರತುಪಡಿಸಿ ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಇದು ಮಹತ್ವದ ವಿಚಾರವಾಗಿದ್ದು ರಾಜಕಾರಣಿಗಳ ಮಕ್ಕಳಿಗೆ ಬಹಳ ಮುಖ್ಯವಾಗುತ್ತದೆ. ದೇಶದ ಜನ, ರಾಜ್ಯದ ಜನ ಗಮನಿಸುತ್ತಿರುತ್ತಾರೆ. ಮಕ್ಕಳು ಕುಟುಂಬದವರು ಅಧಿಕಾರದಲ್ಲಿದ್ದವರ ಹತ್ರಕ್ಕೆ ಹೋಗ್ಬಾರ್ದು. ಮಕ್ಕಳು ತಮಗೆ ತಾವೇ ಸ್ವಯಂ ಪ್ರತಿಬಂಧನೆ ಹಾಕಿಕೊಳ್ಳಬೇಕು ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೆತ್ತದೆ ರಾಜಕೀಯ ಮತ್ತು ಮಕ್ಕಳ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದಾರೆ.

ಅಧಿಕಾರದಲ್ಲಿದ್ದವರ ಮಕ್ಕಳನ್ನ ಬೇರೆಯವರು ಎದುರುಗಡೆ ಹೊಗಳಬಹುದು. ಆದರೆ ಇಡೀ ದೇಶದ ಜನ 90 ಭಾಗದ ಜನ ಆಡಳಿಯ ಯಂತ್ರದ ವ್ಯವಸ್ಥೆಯನ್ನ ಗಮನಿಸ್ತಿರ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಪುತ್ರ ವಿಜಯೇಂದ್ರ ಆಡಳಿತ ಯಂತ್ರದಿಂದ ದೂರ ಇರಬೇಕು ಎಂದು ಚಂದ್ರಶೇಖರ ಸ್ವಾಮಿಜಿ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ಯಾವ ತಪ್ಪುಗಳನ್ನ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ಯೋ ಗೊತ್ತಿಲ್ಲ. ತಪ್ಪುಗಳಿದ್ದರೆ ಕ್ಷಮಿಸಿ, ಯಡಿಯೂರಪ್ಪನವರನ್ನು ಮುಂದುವರೆಸಬೇಕು ಎಂದು ಇದೇ ವೇಳೆ ದೊಡ್ಡಗುಣಿ ಮಠ ರೇವಣ ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಯಡಿಯೂರಪ್ಪ 60 ವರ್ಷಗಳಿಂದ ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಜಾತಿ ಮತ ಪಂಥ ಬಿಟ್ಟು ಸರ್ವರಿಗೂ ಒಳಿತನ್ನು ಮಾಡಿದ್ದಾರೆ. ಮೊರಾರ್ಜಿ ದೇಸಾಯಿ 85 ವರ್ಷ ವಯಸ್ಸಿನಲ್ಲಿ ಪ್ರಧಾನಿಯಾಗಿದ್ದರು. ಯಡಿಯೂರಪ್ಪನರಿಗೆ ಅಷ್ಟೇನು ವಯಸ್ಸಾಗಿಲ್ಲ. ಯಾವ ಜಾತಿ ಎನ್ನದೇ ಪ್ರತಿ ಮಠಮಾನ್ಯ, ಧರ್ಮಪೀಠಗಳಿಗೆ ಅನುದಾನ ಕೊಟ್ಟಿದ್ದಾರೆ. ಅಂಥವರನ್ನು ಬದಲಾಯಿಸಬಾರದು ಎಂದು ಹೇಳಿದರು.
Karnataka CM Yediyurappa hints at stepping down after July 26 Chandrashekar Swamiji makes some shocking statements.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm