ಬ್ರೇಕಿಂಗ್ ನ್ಯೂಸ್
22-07-21 05:04 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ಯಡಿಯೂರಪ್ಪ ಪರವಾಗಿ ಲಿಂಗಾಯತ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗುವಾಗ ಇವರು ಸ್ವಾಮೀಜಿಗಳೇನಾದ್ರೂ ಬಂದಿದ್ದಾರೆಯೇ ? ಅಥವಾ ಇವರದೇ ಸಮುದಾಯದ ಶಾಸಕರು ಏನೆಲ್ಲಾ ಹೇಳಿಕೆ ನೀಡುತ್ತಿದ್ದಾಗ ಕರೆದು ಬುದ್ಧಿ ಹೇಳಿದ್ದಾರೆಯೇ ? ಆಗ ಯಾಕೆ ಇವರೆಲ್ಲ ಯಡಿಯೂರಪ್ಪ ಪರವಾಗಿ ನಿಂತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಇವತ್ತು ಆಡಿರುವ ಮಾತುಗಳನ್ನು ತುಂಬ ಶ್ಲಾಘಿಸುತ್ತೇನೆ. ಅವರೊಬ್ಬ ಮುತ್ಸದ್ಧಿ. ಅವರೊಂದಿಗೆ ಬಿಜೆಪಿಯಲ್ಲಿ ಕೇವಲ ನಾಲ್ಕು ಶಾಸಕರು ಇದ್ದಾಗಿನಿಂದಲೂ ಇದ್ದೇನೆ. ಅವರು ಮೊದಲಿನಿಂದಲೂ ರೈತರು ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಕೆಲವೊಮ್ಮೆ ಯಾರದ್ದೋ ಮಾತು ಕೇಳಿ, ಎಡವಿದ್ದಾರೆ. ಕೆಜೆಪಿ ಹೋದಾಗ, ಯಾರದ್ದೋ ಮಾತು ಕೇಳಿ ಹೋಗಿದ್ದೆ ಎಂದು ಆಬಳಿಕ ಹೇಳಿದ್ದರು. ಆಮೇಲೆ ಬಿಜೆಪಿಯನ್ನು ಮತ್ತೆ ಕಟ್ಟೋಣ ಎಂದು ರಾಜ್ಯದಾದ್ಯಂತ ಓಡಾಡಿದ್ದರು. ಇವತ್ತು ಪಕ್ಷ ನನ್ನ ತಾಯಿ, ಪಕ್ಷದ ರಾಷ್ಟ್ರೀಯ ಮುಖಂಡರು ಏನು ಹೇಳುತ್ತಾರೋ ಅದಕ್ಕೆ ಬದ್ಧನಿದ್ದೇನೆ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾದರಿ ಎಂದು ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಹಿನ್ನೆಲೆಯಲ್ಲಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಮೇಲಿನಂತೆ ಹೇಳಿದರು. ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ, ಅದನ್ನೆಲ್ಲ ಕೇಳಬಾರದು. ಪಕ್ಷ ಏನು ಹೇಳುತ್ತದೋ ನಾವದನ್ನು ಪಾಲಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಗೊತ್ತಿಲ್ಲ ಎಂದು ಹೇಳಿದರು.
Eshwarappa bats for BSY slams Lingayat pontiffs. Amid speculations that his exit was on the cards, several pontiffs made a beeline to Karnataka Chief Minister B S Yediyurappa's official residence for the second consecutive day on Wednesday and threw their weight behind him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm