ಡ್ರಗ್ಸ್ ಜಾಲ ; ರಾಜ್ಯಾದ್ಯಂತ ಪೊಲೀಸ್ ಬೇಟೆ - ಬೊಮ್ಮಾಯಿ ಹೇಳಿಕೆ 

04-09-20 01:01 pm       Bangalore Correspondent   ಕರ್ನಾಟಕ

ಡ್ರಗ್ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಪ್ರಗತಿಯಾಗ್ತಿದೆ. ತನಿಖೆಗೆ ಹೊಸ ಆಯಾಮಗಳು ತೆರೆದುಕೊಳ್ಳುತ್ತಿವೆ. ಡ್ರಗ್ ಜಾಲದ ಮೂಲ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ಜಾಲದ ವಿಚಾರದಲ್ಲಿ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಡ್ರಗ್ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಪ್ರಗತಿಯಾಗ್ತಿದೆ. ತನಿಖೆಗೆ ಹೊಸ ಆಯಾಮಗಳು ತೆರೆದುಕೊಳ್ಳುತ್ತಿವೆ. ಡ್ರಗ್ ಜಾಲದ ಮೂಲ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಇನ್ನು ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಡ್ರಗ್ ಜಾಲ ಬೇರು ಬಿಟ್ಟಿರುವುದು ಗೊತ್ತಾಗಿದೆ. ಎಲ್ಲ ಕಡೆ ಕಾರ್ಯಾಚರಣೆ ನಡೆಸಲಿದ್ದೇವೆ. 

ಈ ಬಗ್ಗೆ ನಾಳೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠರ ಜೊತೆ ಜೊತೆ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಕೆಲವು ಸೂಚನೆಗಳನ್ನು ‌ಕೊಡಲಿದ್ದೇನೆ ಎಂದು ತಿಳಿಸಿದ್ದಾರೆ.

Join our WhatsApp group for latest news updates