ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm