ಬ್ರೇಕಿಂಗ್ ನ್ಯೂಸ್
25-07-21 09:29 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನೀಡಿದ್ದ ಜುಲೈ 25ರ ಗಡುವು ಮುಗಿದಿದ್ದು ಮೇಲಿನಿಂದ ಬರುತ್ತೆ ಎಂದು ಕಾದಿದ್ದ ಆದೇಶ ಇನ್ನೂ ಬಂದಿಲ್ಲ. ಹೀಗಾಗಿ ಕೊನೆಯ ದಿನದ ಆಟ ನಾಳೆಗೆ ಶಿಫ್ಟ್ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರ ಪ್ರಶ್ನೆಗೆ ಸಂಜೆ ವೇಳೆಗೆ ಮತ್ತೊಂದು ದಾಳ ಎಸೆಯುವ ರೀತಿ ಉತ್ತರ ಕೊಟ್ಟಿದ್ದಾರೆ.
ಇಂದು ರಾತ್ರಿ ವರೆಗೂ ಹೈಕಮಾಂಡ್ ಆದೇಶಕ್ಕೆ ಕಾಯುತ್ತೇನೆ. ಏನು ಸುದ್ದಿ ಬರುತ್ತೆ ಅಂತ ಬೆಳಗ್ಗೆ ಹೇಳುತ್ತೇನೆ. ಅಲ್ಲಿ ವರೆಗೂ ಕಾಯಿರಿ. ಹೈಕಮಾಂಡ್ ಹೇಳಿದರೆ ರಾಜಿನಾಮೆ ನೀಡುತ್ತೇನೆ. ಪಕ್ಷದ ಕೆಲಸ ಮಾಡಲು ಹೇಳಿದರೆ ಅದನ್ನೂ ಮಾಡುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಏಕೆ ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕೊನೆ ಕ್ಷಣದ ವರೆಗೂ ಕೆಲಸ ಮಾಡುತ್ತೇನೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಸಂಜೆಯೊಳಗೆ ಹೈಕಮಾಂಡ್ ಆದೇಶ ಬರಲಿದೆ, ಕಾದು ನೋಡಿ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದರು. ಆದರೆ ಗಡುವು ಕಳೆದರೂ ಹೈಕಮಾಂಡ್ ಕಡೆಯಿಂದ ಯಾವುದೇ ಕಮಾಂಡ್ ಬರದೇ ಇರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ನಾಳೆ ಜುಲೈ 26 ಕ್ಕೆ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರೈಸಲಿದ್ದು ಅದರ ಪ್ರಯುಕ್ತ ಬೆಂಗಳೂರಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ವರ್ಷದ ಸಾಧನೆಯ ಬಗ್ಗೆ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಹೈಕಮಾಂಡ್ ಕಡೆಯಿಂದ ಸಿಎಂ ಸ್ಥಾನದಿಂದ ಇಳಿಯಲು ಸೂಚನೆ ಕೊಟ್ಟರೆ ಯಡಿಯೂರಪ್ಪ ವಿದಾಯ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಇದೇ ಸಂದರ್ಭದಲ್ಲಿ ಗೋವಾಕ್ಕೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯಡಿಯೂರಪ್ಪ ಸರಕಾರದ ಬಗ್ಗೆ ಬಹುಪರಾಕ್ ಹೇಳಿದ್ದಾರೆ. ಯಡಿಯೂರಪ್ಪ ಕರ್ನಾಟಕದಲ್ಲಿ ಒಳ್ಳೆ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದ್ದು ಸಿಎಂ ಯಡಿಯೂರಪ್ಪ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾದ್ರಾ ಎನ್ನುವ ಕುತೂಹಲದ ಪ್ರಶ್ನೆ ಎದುರಾಗಿದೆ.
ಒಂದೆಡೆ 500ಕ್ಕೂ ಹೆಚ್ಚು ಲಿಂಗಾಯತ ಸ್ವಾಮೀಜಿಗಳ ಶಕ್ತಿಪ್ರದರ್ಶನ, ಇನ್ನೊಂದೆಡೆ ಪ್ರವಾಹ ಪೀಡಿತ ಪ್ರದೇಶದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಹೈಕಮಾಂಡ್ ರಾಜಕೀಯ ಲೆಕ್ಕಾಚಾರವನ್ನು ಬುಡಮೇಲು ಮಾಡುತ್ತಾ ಎನ್ನುವ ಹೊಸ ಲೆಕ್ಕ ಶುರುವಾಗಿದೆ.
With no official word yet from the BJP high command on leadership change in the state, chief minister B S Yediyurappa on Sunday July 25 evening said that a decision on whether he will continue in office or not will be known by Monday July 26. The speculation about change of guard had gained momentum in the state after the 78-year-old Lingayat strongman and BJP's aging mascot in Karnataka had stated that he would abide by the party high command's decision whether to remain CM or step down.
11-02-25 03:40 pm
HK News Desk
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 04:50 pm
Mangalore Correspondent
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm