ಬ್ರೇಕಿಂಗ್ ನ್ಯೂಸ್
04-09-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಯಲಹಂಕದ ಫ್ಲಾಟಿಗೆ ರೈಡ್ ಮಾಡಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯಂತೆ ಇಂದು ಬೆಳಗ್ಗೆ ಸಿಸಿಬಿ ತಂಡ ರಾಗಿಣಿಯ ಯಲಹಂಕದಲ್ಲಿರುವ ಫ್ಲ್ಯಾಟ್ ಗೆ ದಾಳಿ ನಡೆಸಿತ್ತು. ಮನೆಯಲ್ಲಿ ಸಿಕ್ಕಿದ ಸಿಡಿ, ಇನ್ನಿತರ ರಾಗಿಣಿಗೆ ಸಂಬಂಧಿಸಿದ ಮಾಹಿತಿ ಇರುವ ಪರಿಕರಗಳನ್ನು ವಶಕ್ಕೆ ಪಡೆದ ಪೊಲೀಸರು, ರಾಗಿಣಿಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಇದೀಗ ಪೊಲೀಸರು ರಾಗಿಣಿಯನ್ನು ವಶಕ್ಕೆ ಪಡೆದು ಡ್ರಗ್ ಜಾಲದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ, ರಾಗಿಣಿ ತಾವು ಡ್ರಗ್ ಸೇವಿಸುವುದರ ಜೊತೆಗೆ ಇತರರಿಗೂ ನೀಡುತ್ತಿದ್ದರು ಎಂದು ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈಗ ರಾಗಿಣಿಯನ್ನು ಡ್ರಿಲ್ ಮಾಡಲು ಆರಂಭಿಸಿದ್ದಾರೆ.
ಖಚಿತ ಮಾಹಿತಿಗಳು ಲಭ್ಯವಾದರೆ ರಾಗಿಣಿಯನ್ನು ಇಂದೇ ಬಂಧಿಸುವ ಸಾಧ್ಯತೆಯಿದೆ. ರಾಗಿಣಿ ಜೊತೆಗೆ ಸಂಜನಾಳನ್ನು ಕೂಡ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಡ್ರಗ್ಸ್ ನಂಟಿನಲ್ಲಿ ಕನ್ನಡ ಚಿತ್ರರಂಗದ 15 ಕ್ಕೂ ಹೆಚ್ಚು ನಟ- ನಟಿಯರ ಹೆಸರು ಕೇಳಿಬಂದಿದ್ದು ಆರಂಭದಲ್ಲಿ ಡ್ರಗ್ ಪೆಡ್ಲರ್ ಗಳನ್ನ ಬೆಂಡೆತ್ತುವ ಕೆಲಸದಲ್ಲಿದ್ದಾರೆ. ರಾಗಿಣಿ ಆತ್ಮೀಯನಾಗಿದ್ದ ರವಿಶಂಕರ್ ಎಂಬಾತನನ್ನು ನಿನ್ನೆಯೆ ಪೊಲೀಸರು ಬಂಧಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm