ಬ್ರೇಕಿಂಗ್ ನ್ಯೂಸ್
27-07-21 04:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನ ಏಳು ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಚಾರ್ವಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ತೆಲಂಗಾಣದ ಸಂಹಿತಾ ಪುಂಗವನಮ್ ಪ್ರಥಮ ಸ್ಥಾನ ಗಳಿಸಿದ್ದು, ಪಿಲಿಪ್ಪೈನ್ಸ್ ನ ವೆಂಟುರಾ ತಾಲಿಯಾ ತೃತೀಯ ಸ್ಥಾನ ಗಳಿಸಿದ್ದಾರೆ.
ಹತ್ತು ದಿನಗಳ ಹಿಂದಷ್ಟೇ ನಡೆದಿದ್ದ ಭಾರತದ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಚಾರ್ವಿ, ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಕೊನೆಯ ಸುತ್ತಿನ ವರೆಗೂ ಪ್ರಥಮ ಸ್ಥಾನದಲ್ಲಿದ್ದರು.

ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ಸಂಹಿತಾರಿಂದ ಪ್ರಬಲ ಪೈಪೋಟಿ ಎದುರಿಸಿದ್ದ ಚಾರ್ವಿ ಚಿನ್ನದ ಪದಕದ ಸನಿಹದಲ್ಲಿದ್ದರು. ಕೊನೆಯಲ್ಲಿ ಇಬ್ಬರೂ ತಲಾ 8 ಅಂಕ ಗಳಿಸಿದಾಗ ಟೈ ಬ್ರೇಕರ್ ಆಧಾರದ ಮೇಲೆ ಚಾರ್ವಿ ಎರಡನೇ ಸ್ಥಾನ ಹಾಗೂ ರಜತ ಪದಕಕ್ಕೆ ತೃಪ್ತಿ ಪಡಬೇಕಾಯಿತು. ಅದೇ ಪಂದ್ಯಾವಳಿಯ ತಂಡ ವಿಭಾಗದಲ್ಲಿ ಚಾರ್ವಿ ಪ್ರತಿನಿಧಿಸಿದ 4 ಜನರ ಭಾರತೀಯ ತಂಡ ಚಿನ್ನದ ಪದಕ ಗಳಿಸಿದೆ.
ಈ ಸಾಧನೆಯ ಮುಖಾಂತರ ಆಗಸ್ಟ್ ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಅಂಡರ್ -7 ವಿಭಾಗದಲ್ಲಿ ಚಾರ್ವಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಲಿದ್ದಾರೆ. ಇದೇ ಪಂದ್ಯಾವಳಿಯ ಹತ್ತು ವರ್ಷದ ಒಳಗಿನವರ ವಿಭಾಗದಲ್ಲಿ ಕೂಡ ಚಾರ್ವಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.
ಮೂಲತಃ ಶ್ರವಣಬೆಳಗೊಳದ ಜಿನೇನಹಳ್ಳಿಯ ಅನಿಲ್ ಕುಮಾರ್ ಹಾಗೂ ಅಖಿಲಾ ಅವರ ಪುತ್ರಿಯಾಗಿರುವ ಚಾರ್ವಿ, ಕಳೆದ ಎರಡೂವರೆ ವರ್ಷಗಳಿಂದ ಮಲ್ಲೇಶ್ವರಂನ ಕರ್ನಾಟಕ ಚೆಸ್ ಅಕಾಡೆಮಿಯಲ್ಲಿ ಚದುರಂಗ ಅಭ್ಯಾಸ ಮಾಡುತ್ತಿದ್ದಾರೆ.
ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಿವಾನಂದ ಬಿ.ಎಸ್ ಚಾರ್ವಿಯ ಮುಖ್ಯ ತರಬೇತುದಾರರಾಗಿದ್ದು, ಇನ್ನೋರ್ವ ಖ್ಯಾತ ಆಟಗಾರ ಗಹನ್ ಎಂ.ಜಿ ಸಹಾಯಕ ತರಬೇತುದಾರರಾಗಿ ಚಾರ್ವಿಗೆ ಮಾರ್ಗದರ್ಶನ
ನೀಡುತ್ತಿದ್ದಾರೆ.
Asian Chess Championship 2021 seven-year-old Charvi runner up in the finals. Charvi is from Hassan. 10 days back Chravi had won first place at Indian State Championship.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm