ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm