ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm