ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm