ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.
ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm