ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm