ಬ್ರೇಕಿಂಗ್ ನ್ಯೂಸ್
27-07-21 08:27 pm Mangaluru Correspondent ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಕ್ಯಾಪಿಟಲ್ ಹೊಟೇಲಿನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಬಸವರಾಜ್ ಬೊಮ್ಮಾಯಿ ಹೆಸರನ್ನು ಪ್ರಸ್ತಾವನೆ ಮಾಡಿದ್ದಾರೆ. ಬೊಮ್ಮಾಯಿ ಹೆಸರು ಸೂಚಿಸಿದ್ದಕ್ಕೆ ಸಭೆಯಲ್ಲಿ ಬೆಂಬಲ ವ್ಯಕ್ತವಾಗಿದ್ದು ಸಂಪೂರ್ಣ ಬಹುಮತದೊಂದಿಗೆ ಅಂಗೀಕಾರ ಮಾಡಲಾಗಿದೆ.
ಕೇಂದ್ರದಿಂದ ಬಂದ ವೀಕ್ಷಕರು ಕೂಡ ಹೊಸ ಹೆಸರಿನ ಆಯ್ಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ನಾಳೆ (ಬುಧವಾರ ) ಮಧ್ಯಾಹ್ನ 3.30 ಕ್ಕೆ ಮುಖ್ಯಮಂತ್ರಿ ಆಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಬಲ ಲಿಂಗಾಯತ ಸಮುದಾಯದವರೇ ಆಗಿರುವ ಬೊಮ್ಮಾಯಿ, ಯಡಿಯೂರಪ್ಪ ಆಪ್ತರೂ ಆಗಿದ್ದಾರೆ. ಬಿ ಎಸ್ ವೈ ರಾಜಿನಾಮೆ ಬಳಿಕ ಯಾರು ಸಿಎಂ ಆಗುತ್ತಾರೆ ಎನ್ನುವ ಬಗ್ಗೆ ತೀವ್ರ ಚರ್ಚೆ ನಡೆದಿತ್ತು.
ಪ್ರಬಲ ಲಿಂಗಾಯತ ಸಮುದಾಯದವರೇ ಸಿಎಂ ಆಗಲಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಕೇಳಿಬಂದಿತ್ತು. ಅಲ್ಲದೆ, ಪ್ರಹ್ಲಾದ ಜೋಷಿ, ಬಿ.ಎಲ್. ಸಂತೋಷ್ ಹೆಸರು ಕೂಡ ರೇಸಿನಲ್ಲಿತ್ತು. ಆದರೆ, ಕೊನೆಕ್ಷಣದಲ್ಲಿ ಬಿಎಸ್ವೈ ಮತ್ತೆ ದಾಳ ಉರುಳಿಸಿದ್ದು ತನ್ನ ಆಪ್ತನನ್ನೇ ಸಿಎಂ ಮಾಡುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಹೈಕಮಾಂಡ್ ದಾಳಕ್ಕೆ ಪ್ರತಿ ದಾಳ ಬೀಸಿದ ಯಡಿಯೂರಪ್ಪ ಅದರಲ್ಲಿ ಯಶಸ್ವಿಯಾಗಿದ್ದಾರೆ.
ಇದಕ್ಕೂ ಮುನ್ನ ಶಾಸಕಾಂಗ ಸಭೆಯ ಬಳಿಕ ಹೊಸ ಸಿಎಂ ಹೆಸರನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೂ ಮೊದಲೇ ಸಭೆಗೆ ಎಂಟ್ರಿ ಆಗುವ ಮೂಲಕ ತಮ್ಮದೇ ವ್ಯಕ್ತಿಯನ್ನು ಯಡಿಯೂರಪ್ಪ ಸಿಎಂ ಮಾಡಿ, ಹೊಸ ದಾಳ ಉರುಳಿಸಿದ್ದಾರೆ.
The Bharatiya Janata Party's (BJP) legislature party has elected Basavaraj S Bommai as the new chief minister of Karnataka. Basavaraj Bommai was the home minister in the BS Yediyurappa government and was among the top contenders for the chief minister's post. Just like the outgoing Chief Minister BS Yediyurappa, who resigned on Monday, the new chief minister is also from the politically influential Lingayat community.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm