ಬ್ರೇಕಿಂಗ್ ನ್ಯೂಸ್
27-07-21 09:10 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು ರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆಯೇ ನಮ್ಮ ಸರ್ಕಾರದ ಹೊಣೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿದ ಬೇಕಿದೆ ಎಂದಿದ್ದಾರೆ.
ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಶಾಸಕಾಂಗ ಸಭೆ ಕರೆದು ಸಿಎಂ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನನ್ನ ಹೆಸರನ್ನು ಸೂಚಿಸುವ ಮೂಲಕ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ.
ಕರ್ನಾಟಕ ಸರ್ಕಾರವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ಶಾಸಕರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ನಾನು ನಂಬಿಕೆ ಹುಸಿಗೊಳಿಸಲ್ಲ ಎಂದಿದ್ದಾರೆ.
ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನನ್ನನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವ ಧನ್ಯವಾದಗಳು. ನನ್ನ ಹೆಸರು ಸೂಚಿಸಿ ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದಾರೆ ಎಂದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿ ಅವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ್ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ಅಷ್ಟೇ ಅಲ್ಲದೆ ಯಡಿಯೂರಪ್ಪ ಸರಕಾರದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಅನುಭವ ಮತ್ತು ಲಿಂಗಾಯತ ಕೋಟಾ ಅನುಸಾರ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ. ಅಲ್ಲದೆ, ಬಿಎಸ್ವೈ ಅವರನ್ನು ಪದಚ್ಯುತಿಗೊಳಿಸಿದ ಅಪಕೀರ್ತಿ ತಪ್ಪಿಸಲು ಅವರ ಆಪ್ತನನ್ನೇ ಸಿಎಂ ಮಾಡಲಾಗಿದೆ ಎನ್ನಲಾಗುತ್ತಿದೆ.
The Karnataka BJP legislature party on Tuesday elected Basavaraj Bommai as its new leader and he will succeed outgoing Chief Minister BS Yediyurappa.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm