ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm