ಬ್ರೇಕಿಂಗ್ ನ್ಯೂಸ್
29-07-21 04:58 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 29: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ ವಲಸಿಗರು ಈಗ ಆರ್ಎಸ್ಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೊಮ್ಮಾಯಿ ಸಂಪುಟದಲ್ಲಿ ಮೂವರನ್ನು ಹೊರತುಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್ಎಸ್ಎಸ್ ಬೈಠಕ್ನಲ್ಲಿ ನಿರ್ಣಯ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದ್ದು ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಘರ್ಷ ಏರ್ಪಡುವ ಸಾಧ್ಯತೆ ವ್ಯಕ್ತವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಶಾಸಕರು, ಸಚಿವರಾಗಿದ್ದವರ ಕಾರ್ಯವೈಖರಿ ಆರ್ಎಸ್ಎಸ್ ನಾಯಕರಿಗೆ ಸಮಾಧಾನ ತಂದಿಲ್ಲ. ಹೀಗಾಗಿ ಚಾಮರಾಜಪೇಟೆಯ ಕೇಶವ ಕೃಪಾದಲ್ಲಿ ನಡೆದ ಆರ್ಎಸ್ಎಸ್ ಬೈಠಕ್ನಲ್ಲಿ ವಲಸಿಗ ಶಾಸಕರ ಕುರಿತಾಗಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಅಧಿಕಾರವನ್ನು ಪಡೆದು ಎರಡು ವರ್ಷಗಳೇ ಕಳೆಯುತ್ತ ಬಂದರೂ ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಉಳಿದ ಯಾವುದೇ ವಲಸೆ ಶಾಸಕರು ಕೂಡ ಆರ್ಎಸ್ಎಸ್ ನಾಯಕರನ್ನು ಭೇಟಿಯಾಗಿಲ್ಲ. ಅಲ್ಲದೇ ಅವರ ಕಾರ್ಯ ವೈಖರಿಯಿಂದ ಪಕ್ಷಕ್ಕೆ ಲಾಭವಾಗಿಲ್ಲ. ಹೀಗಾಗಿ ಈ ಮೂವರನ್ನು ಹೊರತುಪಡಿಸಿ ಉಳಿದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ನೀಡಬೇಡಿ. ಬದಲಾಗಿ ನಿಗಮ ಮಂಡಳಿ ಸ್ಥಾನವನ್ನು ನೀಡಿದರೆ ಸಾಕು ಎನ್ನುವ ಸೂಚನೆಯನ್ನು ನೀಡಲಾಗಿದೆ.

ಅಲ್ಲದೆ, ಸಚಿವ ಸಂಪುಟದಲ್ಲಿ ಬಿಜೆಪಿಯ ಹಿರಿಯ ಶಾಸಕರು ಅದರಲ್ಲೂ ಕಳೆದ ಬಾರಿ ಸಚಿವರಾಗಿದ್ದವರನ್ನು ಕೈಬಿಡುವಂತೆ ಸೂಚನೆ ನೀಡಲಾಗಿದೆ. ಹಿರಿಯರ ಪೈಕಿ ಆರ್.ಅಶೋಕ್, ಗೋವಿಂದ ಕಾರಜೋಳ, ಅಶ್ವಥ ನಾರಾಯಣ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅರವಿಂದ ಬೆಲ್ಲದ ಸೇರಿ ಕೆಲವು ಯುವ ಶಾಸಕರನ್ನು ಸಚಿವರಾಗಿ ಮಾಡಬೇಕು. ಉಳಿದವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ.
ಅಲ್ಲದೆ, ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಕೆಲಸದ ಬಗೆಗೂ ರಿಪೋರ್ಟ್ ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಎಲ್ಲ ಶಾಸಕರನ್ನು ಜೊತೆಗೆ ಸೇರಿಸಿಕೊಂಡು ಭ್ರಷ್ಟಾಚಾರ ಇಲ್ಲದೆ ಸರಕಾರ ನಡೆಸಿಕೊಂಡು ಹೋದರೆ ಓಕೆ. ಇಲ್ಲದಿದ್ದರೆ ಮುಂದಿನ ಬಾರಿ ಬದಲಾಯಿಸಬೇಕಾದೀತು ಎಂದು ಆರೆಸ್ಸೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ. ಆರ್ಎಸ್ಎಸ್ ನಾಯಕರ ಯಡಿಯೂರಪ್ಪ ಸರಕಾರದ ಹಲವು ಸಚಿವರ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದು ಇದರ ಪರಿಣಾಮ ಹಲವು ಸಚಿವರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
As Basavarj Bommai took charge as the Chief Minister of Karnataka on Wednesday, Ministerial aspirants have begun lobbying to secure a berth in the new cabinet. Expanding the Ministry will be the first big challenge before the new Chief Minister as he will have to navigate through the cabinet formation exercise by maintaining balance between factions within the ruling BJP in the state.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am