ಬ್ರೇಕಿಂಗ್ ನ್ಯೂಸ್
29-07-21 08:51 pm Mangaluru Correspondent ಕರ್ನಾಟಕ
ಬೆಂಗಳೂರು, ಜುಲೈ 29: ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವುದಕ್ಕೆ ಬಹಳಷ್ಟು ಮಂದಿ ಲಾಬಿ ಮಾಡುತ್ತಿದ್ದಾರೆ. ಇದೇ ವೇಳೆ, ಹಳಬರಿಗೆ ಕೊಕ್ ಸಿಗಲಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಈ ಬಗ್ಗೆ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರು ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೋಟ, ಎರಡು ವರ್ಷದ ಅವಧಿಯಲ್ಲಿ ನನಗೆ ಕೊಟ್ಟ ಎರಡೂ ಇಲಾಖೆಗಳಲ್ಲಿ ಪಾರದರ್ಶಕವಾಗಿ ಮತ್ತು ಯಾವುದೇ ಭ್ರಷ್ಟಾಚಾರ ಇಲ್ಲದೆ ಕೆಲಸ ಮಾಡಿದ್ದೇನೆ. ಎರಡೂ ಇಲಾಖೆಯಲ್ಲಿ ಭ್ರಷ್ಟಾಚಾರ ಝೀರೋಗೆ ಇಳಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಹಾಗೆ ಹೇಳಿಕೊಳ್ಳಲು ನನಗೆ ಧೈರ್ಯವಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು, ಕೇಂದ್ರ ನಾಯಕರು ನನ್ನ ಕೆಲಸವನ್ನು ಗುರುತಿಸಲಿದ್ದಾರೆಂಬ ವಿಶ್ವಾಸ ಇದೆ ಎಂದಿದ್ದಾರೆ.
ರಾಜ್ಯ ಸರಕಾರದಲ್ಲಿ ಯಾರು ಸಚಿವರಾಗಬೇಕು ಎಂದು ನಾವು ಹೇಳುವುದಲ್ಲ. ಯಾರು ಸಚಿವರಾಗಬೇಕು ಎಂಬುದನ್ನು ನಾಯಕರು ನಿರ್ಧರಿಸುತ್ತಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉತ್ತಮ ತಂಡವೊಂದನ್ನು ನಿರ್ಧರಿಸಲಿದ್ದಾರೆ. ಒಂದೂವರೆ ವರ್ಷದ ನಂತರ ಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಉತ್ತಮ ತಂಡವನ್ನು ತರಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ ತಂಡದಲ್ಲಿ ನಿಮಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ, ನಿರೀಕ್ಷೆ ಯಾರಿಗೆ ಇರುವುದಿಲ್ಲ ಹೇಳಿ. ನಿರೀಕ್ಷೆ ಇಲ್ಲದಿರುವ ಕರ್ನಾಟಕದ ರಾಜಕಾರಣಿಗಳು ಯಾರಿದ್ದಾರೆ. ಯಡಿಯೂರಪ್ಪರು ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಮಂತ್ರಿ ಮಾಡಿದ್ದಾರೆ. ಅವರು ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಾರದರ್ಶಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿ ನಡೆಸಿದ್ದು ನನ್ನ ಸಾಧನೆ. ಅದನ್ನು ಪರಿಗಣಿಸಿ ಮತ್ತೆ ಉಳಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.
I have worked promptly and corrupt freely in my department kota Srinivas Poojary on cabinet expansion.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm