ಬ್ರೇಕಿಂಗ್ ನ್ಯೂಸ್
29-07-21 08:51 pm Mangaluru Correspondent ಕರ್ನಾಟಕ
ಬೆಂಗಳೂರು, ಜುಲೈ 29: ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವುದಕ್ಕೆ ಬಹಳಷ್ಟು ಮಂದಿ ಲಾಬಿ ಮಾಡುತ್ತಿದ್ದಾರೆ. ಇದೇ ವೇಳೆ, ಹಳಬರಿಗೆ ಕೊಕ್ ಸಿಗಲಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಈ ಬಗ್ಗೆ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರು ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೋಟ, ಎರಡು ವರ್ಷದ ಅವಧಿಯಲ್ಲಿ ನನಗೆ ಕೊಟ್ಟ ಎರಡೂ ಇಲಾಖೆಗಳಲ್ಲಿ ಪಾರದರ್ಶಕವಾಗಿ ಮತ್ತು ಯಾವುದೇ ಭ್ರಷ್ಟಾಚಾರ ಇಲ್ಲದೆ ಕೆಲಸ ಮಾಡಿದ್ದೇನೆ. ಎರಡೂ ಇಲಾಖೆಯಲ್ಲಿ ಭ್ರಷ್ಟಾಚಾರ ಝೀರೋಗೆ ಇಳಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಹಾಗೆ ಹೇಳಿಕೊಳ್ಳಲು ನನಗೆ ಧೈರ್ಯವಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು, ಕೇಂದ್ರ ನಾಯಕರು ನನ್ನ ಕೆಲಸವನ್ನು ಗುರುತಿಸಲಿದ್ದಾರೆಂಬ ವಿಶ್ವಾಸ ಇದೆ ಎಂದಿದ್ದಾರೆ.
ರಾಜ್ಯ ಸರಕಾರದಲ್ಲಿ ಯಾರು ಸಚಿವರಾಗಬೇಕು ಎಂದು ನಾವು ಹೇಳುವುದಲ್ಲ. ಯಾರು ಸಚಿವರಾಗಬೇಕು ಎಂಬುದನ್ನು ನಾಯಕರು ನಿರ್ಧರಿಸುತ್ತಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉತ್ತಮ ತಂಡವೊಂದನ್ನು ನಿರ್ಧರಿಸಲಿದ್ದಾರೆ. ಒಂದೂವರೆ ವರ್ಷದ ನಂತರ ಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಉತ್ತಮ ತಂಡವನ್ನು ತರಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ ತಂಡದಲ್ಲಿ ನಿಮಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ, ನಿರೀಕ್ಷೆ ಯಾರಿಗೆ ಇರುವುದಿಲ್ಲ ಹೇಳಿ. ನಿರೀಕ್ಷೆ ಇಲ್ಲದಿರುವ ಕರ್ನಾಟಕದ ರಾಜಕಾರಣಿಗಳು ಯಾರಿದ್ದಾರೆ. ಯಡಿಯೂರಪ್ಪರು ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಮಂತ್ರಿ ಮಾಡಿದ್ದಾರೆ. ಅವರು ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಾರದರ್ಶಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿ ನಡೆಸಿದ್ದು ನನ್ನ ಸಾಧನೆ. ಅದನ್ನು ಪರಿಗಣಿಸಿ ಮತ್ತೆ ಉಳಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.
I have worked promptly and corrupt freely in my department kota Srinivas Poojary on cabinet expansion.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am