ಬ್ರೇಕಿಂಗ್ ನ್ಯೂಸ್
04-09-20 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 4: ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಂದಿಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ವಾರದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಹೇಳಿಸಿಕೊಂಡು ಬರಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ, ಸಿಎಂ ಯಡಿಯೂರಪ್ಪ ಪಿತೃಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಆನಂತ್ರವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಹಾಗೆ ಆದಲ್ಲಿ ಸೆಪ್ಟಂಬರ್ 17 ಕ್ಕೆ ಪಿತೃ ಪಕ್ಷ ಮುಗಿಯುತ್ತದೆ. ಇದಾದ ಬಳಿಕ ಅಂದರೆ ಸೆ.18- 19ರ ವೇಳೆಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ನಿಚ್ಚಳ ಎನ್ನಲಾಗ್ತಿದೆ. ಅದಕ್ಕೂ ಮುನ್ನ ಸೆ.13 ಅಥವಾ 14 ಕ್ಕೆ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ವಲಸಿಗರ ಪೈಕಿ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಎಂಬಿಟಿ ಹಾಗೂ ಆರ್. ಶಂಕರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಅಲ್ಲದೆ, ಮೂಲ ಬಿಜೆಪಿಯಿಂದ ಅರವಿಂದ ಲಿಂಬಾವಳಿ ಹಾಗೂ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
ಸಂಪುಟ ವಿಸ್ತರಣೆಯ ಮಾತು ಬಂದಾಗ, ಪುನಾರಚನೆ ಆಗಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಸದ್ಯ ವಿಸ್ತರಣೆಯನ್ನು ಮಾಡಿ ಡಿಸೆಂಬರ್ ಕೊನೆಯಲ್ಲಿ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನುತ್ತದೆ ಮಾಹಿತಿ. ಈ ನಡುವೆ ಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಬೇರೆ ಬೇರೆ ಕಡೆಯಿಂದ ಪೈಪೋಟಿಯೂ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದು ಕೊನೆಕ್ಷಣದಲ್ಲಿ ಯಾರಿಗೆ ಸ್ಥಾನ ಸಿಗಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm