ಬ್ರೇಕಿಂಗ್ ನ್ಯೂಸ್
04-09-20 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 4: ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಂದಿಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ವಾರದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಹೇಳಿಸಿಕೊಂಡು ಬರಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ, ಸಿಎಂ ಯಡಿಯೂರಪ್ಪ ಪಿತೃಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಆನಂತ್ರವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಹಾಗೆ ಆದಲ್ಲಿ ಸೆಪ್ಟಂಬರ್ 17 ಕ್ಕೆ ಪಿತೃ ಪಕ್ಷ ಮುಗಿಯುತ್ತದೆ. ಇದಾದ ಬಳಿಕ ಅಂದರೆ ಸೆ.18- 19ರ ವೇಳೆಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ನಿಚ್ಚಳ ಎನ್ನಲಾಗ್ತಿದೆ. ಅದಕ್ಕೂ ಮುನ್ನ ಸೆ.13 ಅಥವಾ 14 ಕ್ಕೆ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ವಲಸಿಗರ ಪೈಕಿ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಎಂಬಿಟಿ ಹಾಗೂ ಆರ್. ಶಂಕರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಅಲ್ಲದೆ, ಮೂಲ ಬಿಜೆಪಿಯಿಂದ ಅರವಿಂದ ಲಿಂಬಾವಳಿ ಹಾಗೂ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
ಸಂಪುಟ ವಿಸ್ತರಣೆಯ ಮಾತು ಬಂದಾಗ, ಪುನಾರಚನೆ ಆಗಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಸದ್ಯ ವಿಸ್ತರಣೆಯನ್ನು ಮಾಡಿ ಡಿಸೆಂಬರ್ ಕೊನೆಯಲ್ಲಿ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನುತ್ತದೆ ಮಾಹಿತಿ. ಈ ನಡುವೆ ಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಬೇರೆ ಬೇರೆ ಕಡೆಯಿಂದ ಪೈಪೋಟಿಯೂ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದು ಕೊನೆಕ್ಷಣದಲ್ಲಿ ಯಾರಿಗೆ ಸ್ಥಾನ ಸಿಗಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm