ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm