ಬ್ರೇಕಿಂಗ್ ನ್ಯೂಸ್
02-08-21 12:12 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ನಗರದ ಕೈಕೊಂಡ್ರನಹಳ್ಳಿ ಕೆರೆಯ ಬಳಿ ಗೋದ್ರೆಜ್ ಪ್ರಾಪರ್ಟೀಸ್ ಮತ್ತು ವಂಡರ್ ಪ್ರಾಜೆಕ್ಟ್ಸ್ ಡೆವಲಪ್ಮೆಂಟ್ ಕಂಪೆನಿಗಳಿಗೆ ಸೇರಿದ ಎರಡು ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ 2018ರ ಜನವರಿ 10ರಂದು ಪರಿಸರ ಇಲಾಖೆ ನೀಡಿದ್ದ ಅನುಮತಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ಜಿಟಿ) ಮಂಡಳಿ ರದ್ದುಪಡಿಸಿದ್ದು ಅಲ್ಲಿನ ಬಹುಮಹಡಿ ಕಟ್ಟಡಗಳನ್ನು ನೆಲಸಮಗೊಳಿಸಲು ಆದೇಶಿಸಿದೆ.
ಎಚ್.ಪಿ. ರಾಜಣ್ಣ ಎಂಬವರು ಗೋದ್ರೆಜ್ ಪ್ರಾಪರ್ಟಿ ಮತ್ತು ವಂಡರ್ ಪ್ರಾಜೆಕ್ಟ್ ಡೆವಲಪ್ಮೆಂಟ್ ವಿರುದ್ಧ ಎನ್ ಜಿಟಿಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ವಿಚಾರಣೆ ನಡೆಸಿದ ಎನ್ಜಿಟಿ ಕೋರ್ಟ್ ಬಳಿಕ ಕಟ್ಟಡ ನೆಲಸಮ ಮಾಡಲು ಆದೇಶ ನೀಡಿದೆ.
ಎನ್ಜಿಟಿ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೊರೆ
ಎನ್ಜಿಟಿ ನ್ಯಾಯಾಲಯ ಆದೇಶ ನೀಡಿರುವುದು ಗಮನಕ್ಕೆ ಬಂದಿದೆ. ನಮ್ಮ ಸಮರ್ಥನೆ ಮತ್ತು ವಾದವನ್ನು ಎನ್ಜಿಟಿ ಪರಿಗಣನೆಗೆ ತೆಗೆದುಕೊಂಡಿಲ್ಲ. ಪ್ರಕರಣದಲ್ಲಿ ನಮ್ಮ ಅರ್ಹತೆ ಮತ್ತು ನಿಯಮ ಪಾಲನೆ ಬಗ್ಗೆ ನಮಗೆ ವಿಶ್ವಾಸವಿದೆ. ಜವಾಬ್ದಾರಿಯುತ ಕಾರ್ಪೊರೇಟ್ ವ್ಯವಹಾರಸ್ಥರಾಗಿ ಸಂಬಂಧಿತ ಎಲ್ಲ ನಿಯಮಗಳನ್ನು ಅನುಸರಿಸಿದ್ದೇವೆ. ಎನ್ಜಿಟಿ ಆದೇಶವನ್ನು ಸುಪ್ರೀಕೋರ್ಟ್ನಲ್ಲಿ ಪ್ರಶ್ನಿಸಲು ಉದ್ದೇಶಿಸಲಾಗಿದೆ ಎಂದು ಗೋದ್ರೆಜ್ ಪ್ರಾಪರ್ಟೀಸ್ ಕಂಪನಿಯ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.
ಯೋಜನಾ ವೆಚ್ಚದ ಶೇ.10 ರಷ್ಟು ದಂಡ
ಇದಲ್ಲದೆ, ಪರಿಸರ ಹಾನಿ ಪುನಶ್ಚೇತನಕ್ಕಾಗಿ ಗೋದ್ರೆಜ್ ಪ್ರಾಪರ್ಟಿಸ್ಗೆ ಯೋಜನಾ ವೆಚ್ಚದ ಶೇ.10 ರಷ್ಟು ದಂಡ ವಿಧಿಸುವುದಾಗಿ ಎನ್ಜಿಟಿ ತಿಳಿಸಿದೆ. ಪರಿಸರ ಇಲಾಖೆ ಈ ಮೊದಲು ಸಲ್ಲಿಸಿದ್ದ ಅರ್ಜಿಯಲ್ಲಿ ಯೋಜನಾ ವೆಚ್ಚವು 310 ಕೋಟಿ ರೂ. ಎಂದು ತಿಳಿಸಿತ್ತು. ಅದರಂತೆ, 31 ಕೋಟಿ ರೂ. ದಂಡ ಪಾವತಿಸಲು ನಿರ್ದೇಶನ ನೀಡಲಾಗಿದೆ.
The National Green Tribunal on July 30, quashed the environmental clearance (EC) granted to a high-rise luxury project by Godrej Properties Limited and Wonder Projects Development in Bengaluru and directed its immediate demolition. NGT also imposed a penalty of Rs 31 crore on the project proponent and said the amount shall be used for demolition of the constructions, restoration of the area to the original position, rejuvenation and reforestation of the Kaikondarahalli lake and its surrounding area.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm