ಬ್ರೇಕಿಂಗ್ ನ್ಯೂಸ್
02-08-21 02:26 pm Headline Karnataka News Network ಕರ್ನಾಟಕ
ಚಾಮರಾಜನಗರ, ಆಗಸ್ಟ್ 2: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ಪರೋಕ್ಷ ಸಹಕರಿಸಿದ್ದ ಬಿ.ಎಸ್.ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಕೊನೆಗೂ ಬಿಜೆಪಿ ಸೇರುವುದು ಖಚಿತವಾಗಿದ್ದು ಆಗಸ್ಟ್ 5ರಂದು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಿಂದ ಪ್ರಥಮ ಭಾರಿಗೆ ಬಿ.ಎಸ್.ಪಿ ಪಕ್ಷದಿಂದ ಶಾಸಕರಾದ ಎನ್. ಮಹೇಶ್, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಬೆಂಬಲ ಸೂಚಿಸಿ ಸಚಿವರಾಗಿದ್ದರು. ಬಳಿಕ ಕೆಲವರ ಜೊತೆ ಮುನಿಸು ಉಂಟಾಗಿ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದರು. ಪಕ್ಷದ ಅಧ್ಯಕ್ಷೆ ಮಾಯಾವತಿ ಸೂಚನೆಯಂತೆ, ರಾಜಿನಾಮೆ ನೀಡಿದ್ದು ಎನ್ನಲಾಗಿತ್ತು.
ಬಳಿಕ 17 ಶಾಸಕರ ರಾಜಿನಾಮೆಯಿಂದ ಮೈತ್ರಿ ಸರಕಾರ ಪತನಗೊಳ್ಳುವ ಸಂದರ್ಭ ಎದುರಾದಾಗ, ಬಹುಮತ ಸಾಬೀತು ವೇಳೆಯಲ್ಲಿ ಬಿಎಸ್ಪಿ ಪಕ್ಷದ ಅಧಿನಾಯಕಿ ಮಾಯಾವತಿ ನಿರ್ದೇಶನವನ್ನು ಧಿಕ್ಕರಿಸಿದ್ದರಿಂದ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವ ಕನಸು ಹೊತ್ತಿದ್ದ ಎನ್. ಮಹೇಶ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿರಲಿಲ್ಲ. ಮೊನ್ನೆ ಜುಲೈ 30 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎನ್. ಮಹೇಶ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಎನ್. ಮಹೇಶ್, ರಾಜಕೀಯ ವಿರೋಧಿಯಾಗಿದ್ದ ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ್ದು ಪರಸ್ಪರ ಕುಶಲೋಪರಿ ಮಾತನಾಡಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ಎನ್. ಮಹೇಶ್, ಆಗಸ್ಟ್ 5 ರಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಮಲ ಹಿಡಿಯಲಿದ್ದೇನೆ ಎಂದು ಸ್ಪಷ್ಟ ಪಡಿಸಿದರು.
ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಜಿಲ್ಲೆ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ಮಾಡುವುದಾಗಿ ಶಾಸಕ ಎನ್. ಮಹೇಶ್ ಹೇಳಿದ್ದಾರೆ.
Kollegal MLA N Mahesh, expelled from the Bahujan Samaj Party (BSP), said on Friday that he would soon join the BJP. For the sake of my future in politics, I've decided to join the BJP. The president of the Karnataka unit of the party and other leaders will discuss and give the date, and I will join then,'' Mahesh, who was ousted from the BSP in 2019, told PTI.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm