ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm