ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm