ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm