ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm