ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm