ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.
ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm