ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm