ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.
ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm