ಬ್ರೇಕಿಂಗ್ ನ್ಯೂಸ್
04-08-21 03:33 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 4: ಭಾರೀ ಭ್ರಷ್ಟಾಚಾರ ನಡೆಸಿದ ಆರೋಪಕ್ಕೀಡಾಗಿದ್ದ ಶಶಿಕಲಾ ಜೊಲ್ಲೆ ಸಂಪುಟಕ್ಕೆ ಸೇರ್ಪಡೆಯಾಗಿದ್ದು ಬಿಜೆಪಿಯಲ್ಲೇ ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಶಶಿಕಲಾ ಜೊಲ್ಲೆಗೆ ಈ ಬಾರಿ ಸ್ಥಾನ ಸಿಗಲ್ಲ ಎಂದೇ ಮೊದಲಿನಿಂದಲೂ ಕೇಳಿಬಂದಿತ್ತು. ಅವರ ಬದಲಿಗೆ ಚಿತ್ರದುರ್ಗ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಸ್ಥಾನ ಸಿಗುವುದು ಖಚಿತವಾಗಿತ್ತು. ಆದರೆ, ಕೊನೆಕ್ಷಣದಲ್ಲಿ ಶಶಿಕಲಾ ಜೊಲ್ಲೆ ಅವರನ್ನೇ ಉಳಿಸಿಕೊಳ್ಳಲು ಯಾರ ಕೈ ಕೆಲಸ ಮಾಡಿದೆ ಎನ್ನುವ ಕುತೂಹಲ ಎದ್ದಿದೆ.


ಶಶಿಕಲಾ ಜೊಲ್ಲೆಗೆ ಮತ್ತೆ ಸ್ಥಾನ ಸಿಗುವಂತೆ ಮಾಡಲು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರಭಾವ ಕೆಲಸ ಮಾಡಿದೆ ಎನ್ನುವ ಮಾತು ಕೇಳಿಬಂದಿದೆ. ಬಿ.ಎಸ್. ಯಡಿಯೂರಪ್ಪ ಪಟ್ಟಿಯಲ್ಲಿ ಜೊಲ್ಲೆ ಹೆಸರನ್ನು ಕೈಬಿಟ್ಟು ಪೂರ್ಣಿಮಾ ಶ್ರೀನಿವಾಸ್ ಗೆ ನೀಡುವ ಬಗ್ಗೆ ಖಾತ್ರಿ ಮಾಡಿದ್ದರು. ನಿನ್ನೆ ರಾತ್ರಿಯ ವರೆಗೂ ಜೊಲ್ಲೆ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಇರಲಿಲ್ಲ. ಆದರೆ, ಕೊನೆಯ ರಾತ್ರಿಯಲ್ಲಿ ಹಲವರ ಹೆಸರು ಅದಲು ಬದಲಾಗಿತ್ತು.

ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಸಂಸದರಾಗಿದ್ದಾರೆ. ಕುಟುಂಬ ರಾಜಕಾರಣ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿಕೊಂಡೇ ಬಂದ ಬಿಜೆಪಿ ಒಂದೇ ಮನೆಯ ಇಬ್ಬರಿಗೆ ಸ್ಥಾನ ನೀಡಿದೆ. ಅಲ್ಲದೆ, ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುತ್ತಲೇ ಮೊನ್ನೆ ಮೊನ್ನೆ ಮಾತೃಪೂರ್ಣ ಯೋಜನೆಯಲ್ಲಿ ಮೊಟ್ಟೆ ಟೆಂಡರ್ ನೀಡಿಕೆಯಲ್ಲಿ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದು ವಾಹಿನಿಯೊಂದರ ಹಿಡನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೇ ಕಾರಣಕ್ಕೆ ಶಶಿಕಲಾ ಜೊಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗಲಾರದು ಎಂದೇ ವಾದಿಸಲಾಗಿತ್ತು. ಬಿಜೆಪಿಯಲ್ಲಿ ಬೇರೆ ಮಹಿಳಾ ಶಾಸಕಿಯರಿದ್ದರೂ, ಶಶಿಕಲಾಗೆ ಮತ್ತೆ ಮಣೆ ಹಾಕಿದ್ದು ಬಿಜೆಪಿ ಒಳಗೇ ಭಾರೀ ಮುಜುಗರ ಸೃಷ್ಟಿಸಿದೆ.

ಮೈಸೂರಿನ ಎಸ್.ಎ.ರಾಮದಾಸ್ ಕೂಡ ಸಚಿವರಾಗುವುದು ಖಚಿತ ಆಗಿತ್ತು. ಇದೇ ಮಾತನ್ನು ಸ್ವತಃ ರಾಮದಾಸ್ ಕೂಡ ಹೇಳಿಕೊಂಡಿದ್ದಾರೆ. ನಿನ್ನೆ ರಾತ್ರಿ ವರೆಗೂ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು. ಆದರೆ ರಾತ್ರಿ ಬೆಳಗಾಗುವುದರ ಒಳಗೆ ಹೆಸರು ತಪ್ಪಿದೆ. ಯಡಿಯೂರಪ್ಪ ರಾಮದಾಸ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಶಿಫಾರಸು ಮಾಡಿದ್ದರು ಎನ್ನಲಾಗಿದೆ. ಆದರೆ, ಕೊನೆಯ ವೇಳೆಗೆ ರಾಮದಾಸ್ ಹೆಸರೂ ಬದಲಾಗಿದೆ.
Minister for Women and Child Development Shashikala Jolle of corruption in free egg distribution scheme is now in New Cabinet of Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm