ಬ್ರೇಕಿಂಗ್ ನ್ಯೂಸ್
04-08-21 03:33 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 4: ಭಾರೀ ಭ್ರಷ್ಟಾಚಾರ ನಡೆಸಿದ ಆರೋಪಕ್ಕೀಡಾಗಿದ್ದ ಶಶಿಕಲಾ ಜೊಲ್ಲೆ ಸಂಪುಟಕ್ಕೆ ಸೇರ್ಪಡೆಯಾಗಿದ್ದು ಬಿಜೆಪಿಯಲ್ಲೇ ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಶಶಿಕಲಾ ಜೊಲ್ಲೆಗೆ ಈ ಬಾರಿ ಸ್ಥಾನ ಸಿಗಲ್ಲ ಎಂದೇ ಮೊದಲಿನಿಂದಲೂ ಕೇಳಿಬಂದಿತ್ತು. ಅವರ ಬದಲಿಗೆ ಚಿತ್ರದುರ್ಗ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಸ್ಥಾನ ಸಿಗುವುದು ಖಚಿತವಾಗಿತ್ತು. ಆದರೆ, ಕೊನೆಕ್ಷಣದಲ್ಲಿ ಶಶಿಕಲಾ ಜೊಲ್ಲೆ ಅವರನ್ನೇ ಉಳಿಸಿಕೊಳ್ಳಲು ಯಾರ ಕೈ ಕೆಲಸ ಮಾಡಿದೆ ಎನ್ನುವ ಕುತೂಹಲ ಎದ್ದಿದೆ.


ಶಶಿಕಲಾ ಜೊಲ್ಲೆಗೆ ಮತ್ತೆ ಸ್ಥಾನ ಸಿಗುವಂತೆ ಮಾಡಲು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರಭಾವ ಕೆಲಸ ಮಾಡಿದೆ ಎನ್ನುವ ಮಾತು ಕೇಳಿಬಂದಿದೆ. ಬಿ.ಎಸ್. ಯಡಿಯೂರಪ್ಪ ಪಟ್ಟಿಯಲ್ಲಿ ಜೊಲ್ಲೆ ಹೆಸರನ್ನು ಕೈಬಿಟ್ಟು ಪೂರ್ಣಿಮಾ ಶ್ರೀನಿವಾಸ್ ಗೆ ನೀಡುವ ಬಗ್ಗೆ ಖಾತ್ರಿ ಮಾಡಿದ್ದರು. ನಿನ್ನೆ ರಾತ್ರಿಯ ವರೆಗೂ ಜೊಲ್ಲೆ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಇರಲಿಲ್ಲ. ಆದರೆ, ಕೊನೆಯ ರಾತ್ರಿಯಲ್ಲಿ ಹಲವರ ಹೆಸರು ಅದಲು ಬದಲಾಗಿತ್ತು.

ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಸಂಸದರಾಗಿದ್ದಾರೆ. ಕುಟುಂಬ ರಾಜಕಾರಣ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿಕೊಂಡೇ ಬಂದ ಬಿಜೆಪಿ ಒಂದೇ ಮನೆಯ ಇಬ್ಬರಿಗೆ ಸ್ಥಾನ ನೀಡಿದೆ. ಅಲ್ಲದೆ, ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುತ್ತಲೇ ಮೊನ್ನೆ ಮೊನ್ನೆ ಮಾತೃಪೂರ್ಣ ಯೋಜನೆಯಲ್ಲಿ ಮೊಟ್ಟೆ ಟೆಂಡರ್ ನೀಡಿಕೆಯಲ್ಲಿ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದು ವಾಹಿನಿಯೊಂದರ ಹಿಡನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೇ ಕಾರಣಕ್ಕೆ ಶಶಿಕಲಾ ಜೊಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗಲಾರದು ಎಂದೇ ವಾದಿಸಲಾಗಿತ್ತು. ಬಿಜೆಪಿಯಲ್ಲಿ ಬೇರೆ ಮಹಿಳಾ ಶಾಸಕಿಯರಿದ್ದರೂ, ಶಶಿಕಲಾಗೆ ಮತ್ತೆ ಮಣೆ ಹಾಕಿದ್ದು ಬಿಜೆಪಿ ಒಳಗೇ ಭಾರೀ ಮುಜುಗರ ಸೃಷ್ಟಿಸಿದೆ.

ಮೈಸೂರಿನ ಎಸ್.ಎ.ರಾಮದಾಸ್ ಕೂಡ ಸಚಿವರಾಗುವುದು ಖಚಿತ ಆಗಿತ್ತು. ಇದೇ ಮಾತನ್ನು ಸ್ವತಃ ರಾಮದಾಸ್ ಕೂಡ ಹೇಳಿಕೊಂಡಿದ್ದಾರೆ. ನಿನ್ನೆ ರಾತ್ರಿ ವರೆಗೂ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು. ಆದರೆ ರಾತ್ರಿ ಬೆಳಗಾಗುವುದರ ಒಳಗೆ ಹೆಸರು ತಪ್ಪಿದೆ. ಯಡಿಯೂರಪ್ಪ ರಾಮದಾಸ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಶಿಫಾರಸು ಮಾಡಿದ್ದರು ಎನ್ನಲಾಗಿದೆ. ಆದರೆ, ಕೊನೆಯ ವೇಳೆಗೆ ರಾಮದಾಸ್ ಹೆಸರೂ ಬದಲಾಗಿದೆ.
Minister for Women and Child Development Shashikala Jolle of corruption in free egg distribution scheme is now in New Cabinet of Karnataka.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm