ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.

ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm