ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm